23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಕಿರಣ್ ಎಂಬಾತನ ಹುಟ್ಟುಹಬ್ಬ ನ.18 ರಂದು ಇದ್ದು. ರಾತ್ರಿ ಗೆಳೆಯರ ಜೊತೆ ಮನೆಯ ಪಕ್ಕದ ರಸ್ತೆಯಲ್ಲಿ ಕೇಕ್ ಜೊತೆ ಸ್ಪ್ರೇ ಮತ್ತಿತರರು ಬಂದಿದ್ದರು. ರಸ್ತೆಯಲ್ಲಿ ಸ್ಕೂಟರ್ ಸೀಟ್ ಮೇಲೆ ಕೇಕ್ ಇಟ್ಟು ಕಿರಣ್ ಕ್ಯಾಂಡಲ್ ಗೆ ಬೆಂಕಿ ಹಚ್ಚಿದಾಗ ಗೆಳೆಯರು ಸೇರಿ ಸ್ಪ್ರೇ ಹಾಗೂ ಇನ್ನಿತರ ಕೆಮಿಕಲ್ ನಿಂದ ಕಿರಣ್ ಮೇಲೆ ಹಾಕಿದ್ದಾರೆ ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗದೆ ಸಣ್ಣಪುಟ್ಟ ಗಾಯದೊಂದಿದೆ ಕಿರಣ್ ಪರಾಗಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಗೆಳೆಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya
error: Content is protected !!