25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.

ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ಮಹಾಪುರುಷರ ಜೀವನ ಚರಿತ್ರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಉದ್ದೇಶದಿಂದ ಇಂತಹ ಕಾರ್‍ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಅರ್ಚಕ ಸತ್ಯನಾರಾಯಣ ಹೊಳ್ಳ, ಪ್ರದೀಪ್ ಶೆಟ್ಟಿ, ಮನೋಹರ ನಾಯ್ಕ, ಲೀಲಾವತಿ ನಾಯ್ಕ, ಹಾಗೂ ಪುರುಷೋತ್ತಮ ಶೆಟ್ಟಿಯವರು ಕನಕ ಜಯಂತಿಯ ಬಗ್ಗೆ ಮಾತನಾಡಿದರು.

ತಂಡದ ಪುಟಾಣಿ ಕಲಾವಿದರಿಂದ “ಕನಕನಿಗೊಲಿದ ಗೋವಿಂದ” ಕಿರುನಾಟಕ ಪ್ರದರ್ಶನ ಹಾಗೂ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಕು| ಸ್ಮಿತಾ ಸ್ವಾಗತಿಸಿ, ಕು|ಜಿತೀಕ್ಷ ನಿರೂಪಿಸಿ ಧನ್ಯವಾದವಿತ್ತರು.

Related posts

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya
error: Content is protected !!