September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.

ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ಮಹಾಪುರುಷರ ಜೀವನ ಚರಿತ್ರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಉದ್ದೇಶದಿಂದ ಇಂತಹ ಕಾರ್‍ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಅರ್ಚಕ ಸತ್ಯನಾರಾಯಣ ಹೊಳ್ಳ, ಪ್ರದೀಪ್ ಶೆಟ್ಟಿ, ಮನೋಹರ ನಾಯ್ಕ, ಲೀಲಾವತಿ ನಾಯ್ಕ, ಹಾಗೂ ಪುರುಷೋತ್ತಮ ಶೆಟ್ಟಿಯವರು ಕನಕ ಜಯಂತಿಯ ಬಗ್ಗೆ ಮಾತನಾಡಿದರು.

ತಂಡದ ಪುಟಾಣಿ ಕಲಾವಿದರಿಂದ “ಕನಕನಿಗೊಲಿದ ಗೋವಿಂದ” ಕಿರುನಾಟಕ ಪ್ರದರ್ಶನ ಹಾಗೂ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಕು| ಸ್ಮಿತಾ ಸ್ವಾಗತಿಸಿ, ಕು|ಜಿತೀಕ್ಷ ನಿರೂಪಿಸಿ ಧನ್ಯವಾದವಿತ್ತರು.

Related posts

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya
error: Content is protected !!