25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ನಡ: ಎಸ್. ಎಸ್ ಎಫ್. ಕರ್ನಾಟಕ ಇದರ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಕೊಡಂಗೇರಿಯಲ್ಲಿ ನ. 16 ಮತ್ತು 17ರಂದು ನಡೆದ “ರಾಜ್ಯಮಟ್ಟದ ಸಾಹಿತ್ಯೋತ್ಸವ 2024” ಇದರಲ್ಲಿ ನಡ ಗ್ರಾಮದ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಹಾಗೂ ಎಸ್. ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕರ್ನಾಟಕದ ಸುಮಾರು 23 ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಸಯ್ಯದ್ ಮುಹಮ್ಮದ್ ಉವೈಸ್ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಗೋವಾದಲ್ಲಿ ಜರಗಲಿರುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.

ಇವರು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಳೆದ ವರ್ಷ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರಿಗೆ,ಶಾಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಗೌರವವನ್ನು ತಂದು ಕೊಟ್ಟಿದ್ದರು. ಇವರು ಮಂಜೊಟ್ಟಿಯ ಸಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರ್ ಶಬ ದಂಪತಿಯ ಪುತ್ರ.

Related posts

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya
error: Content is protected !!