September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ನಡೆಸಲ್ಪಡುವ ಉಡುಪಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನ.19 ರಂದು ಡಾ| ಶಿವರಾಮ ಕಾರಂತ ಥೀಂ ಪಾರ್ಕ್ ಕೋಟದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಪೂಜ್ಯರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಿಡಿಒ ರವೀಂದ್ರ ರಾವ್ , ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರವೀಂದ್ರ ಭಾಗವಹಿಸಿ ಶುಭಹಾರೈಸಿದರು.

ನಿರ್ದೇಶಕ ಡಾ| ಶಶಿಕಾಂತ ಜೈನ್ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದರು.

ರಾಜ್ಯಮಟ್ಟದ ಸ್ಪರ್ಧೆಯು ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಅತಿಥಿಗಳ ಸಮ್ಮುಖದಲ್ಲಿ ಜನವರಿ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಶಿವರಾಮ ಕಾರಂತ ಟ್ರಸ್ಟಿನ ಕಾರ್ಯದರ್ಶಿ ನರೇಂದ್ರ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಸಂಘಟಕ ಅಶೋಕ ಪೂಜಾರಿ ಸ್ಪರ್ಧೆಯ ಮಾಹಿತಿಯನ್ನು ನೀಡಿದರು.

Related posts

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ಸೆ. 5ರಂದು ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya
error: Content is protected !!