July 23, 2026
ಗ್ರಾಮಾಂತರ ಸುದ್ದಿ

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya
error: Content is protected !!