April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

ಉಜಿರೆ : ಅಖಿಲ ಭಾರತೀಯ ಕಂಪನಿ ಸೆಕ್ರೆಟರಿ ಸಂಸ್ಥೆ ನಡೆಸಿದ ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮೂಲಕ ಪರೀಕ್ಷೆ ಬರೆದ ಏಳು ವಿದ್ಯಾರ್ಥಿಗಳು ಸಹ ತೇರ್ಗಡೆ ಹೊಂದಿ ಸಾಧನೆ ಮಾಡಿದ್ದಾರೆ.

ಪರೀಕ್ಷೆಗೆ ಹಾಜರಾದ ರೋಹಿತ್, ಓಜಸ್ ಬಿ ಕದಂಬಿ , ಗೌತಮಿ ಶೆಟ್ಟಿ , ಅನನ್ಯಲಕ್ಷ್ಮೀ , ಪ್ರಾಪ್ತ ಪಿ. ಹೆಗ್ಡೆ , ಸಹನಾ ಆರ್. ಕುರ್ಲಿ ಹಾಗೂ ಕುಶಲ ತೇರ್ಗಡೆ ಹೊಂದಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಸಾಧಕರಿಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ. ಹಾಗೂ ಉಪನ್ಯಾಸಕರು ಶುಭ ಹಾರೈಸಿದ್ಧಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya
error: Content is protected !!