April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

ಕೊಕ್ಕಡ : ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನಿ ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ಇವರ ರವರ ಜನ್ಮದಿನ ಕಾರ್ಯಕ್ರಮವನ್ನು ನ. 19 ರಂದು ಕೊಕ್ಕಡ ಎಂಡೊಸಲ್ಪಾನ್ ಸಂತ್ರಸ್ತರ ಪಾಲನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ರವರು ಶ್ರೀಮತಿ ಇಂದಿರಾ ಗಾಂಧಿ ಅವರ ಜನಪರ ಯೋಜನೆಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಮುಖಂಡ ಎಂ ಎಚ್ ಮುಹಮ್ಮದ್ ಕಲಂದರ್ ಶಾ ಕೊಕ್ಕಡ, ಮಹಿಳಾ ಕಾಂಗ್ರೆಸ್ ಮುಖಂಡರಾದ ಉಷಾ ಶರತ್, ವನಿತಾ ಎಂ ಸಾಲಿಯಾನ್, ಶೋಭಾ ನಾರಾಯಣ ಗೌಡ, ಕೇಶವತಿ, ತನುಜಾ ಶೇಖರ್, ಸುಚಿತ್ರಾ ಕೊಳ್ಳಜೆ, ಹರ್ಷಲತಾ, ಸಿಂಧೂ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಯವರ ಜನ್ಮ ದಿನಾಚರಣೆಯ ಪ್ರಯಕ್ತ ಸಿಹಿ ವಿತರಣೆ ಹಾಗೂ ವಸ್ತ್ರಗಳನ್ನು ವಿತರಿಸಲಾಯಿತು.

ಬೆಳ್ತಂಗಡಿ ಮಹಿಳಾ ಕಾಂಗ್ರೇಸ್ ಘಟಕ ಗ್ರಾಮೀಣ ಸಮಿತಿ ಅಧ್ಯಕ್ಷೆ ಶ್ರೀಮತಿ ನಮಿತಾ ಪೂಜಾರಿ ಸ್ವಾಗತಿಸಿದರು.

Related posts

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya
error: Content is protected !!