25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya
error: Content is protected !!