24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya
error: Content is protected !!