23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya
error: Content is protected !!