22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya
error: Content is protected !!