22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.

ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ಮಹಾಪುರುಷರ ಜೀವನ ಚರಿತ್ರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಉದ್ದೇಶದಿಂದ ಇಂತಹ ಕಾರ್‍ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಅರ್ಚಕ ಸತ್ಯನಾರಾಯಣ ಹೊಳ್ಳ, ಪ್ರದೀಪ್ ಶೆಟ್ಟಿ, ಮನೋಹರ ನಾಯ್ಕ, ಲೀಲಾವತಿ ನಾಯ್ಕ, ಹಾಗೂ ಪುರುಷೋತ್ತಮ ಶೆಟ್ಟಿಯವರು ಕನಕ ಜಯಂತಿಯ ಬಗ್ಗೆ ಮಾತನಾಡಿದರು.

ತಂಡದ ಪುಟಾಣಿ ಕಲಾವಿದರಿಂದ “ಕನಕನಿಗೊಲಿದ ಗೋವಿಂದ” ಕಿರುನಾಟಕ ಪ್ರದರ್ಶನ ಹಾಗೂ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಕು| ಸ್ಮಿತಾ ಸ್ವಾಗತಿಸಿ, ಕು|ಜಿತೀಕ್ಷ ನಿರೂಪಿಸಿ ಧನ್ಯವಾದವಿತ್ತರು.

Related posts

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ ವಿಭಾಗ ಉದ್ಘಾಟನೆ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya
error: Content is protected !!