23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.

ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ಮಹಾಪುರುಷರ ಜೀವನ ಚರಿತ್ರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಉದ್ದೇಶದಿಂದ ಇಂತಹ ಕಾರ್‍ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಅರ್ಚಕ ಸತ್ಯನಾರಾಯಣ ಹೊಳ್ಳ, ಪ್ರದೀಪ್ ಶೆಟ್ಟಿ, ಮನೋಹರ ನಾಯ್ಕ, ಲೀಲಾವತಿ ನಾಯ್ಕ, ಹಾಗೂ ಪುರುಷೋತ್ತಮ ಶೆಟ್ಟಿಯವರು ಕನಕ ಜಯಂತಿಯ ಬಗ್ಗೆ ಮಾತನಾಡಿದರು.

ತಂಡದ ಪುಟಾಣಿ ಕಲಾವಿದರಿಂದ “ಕನಕನಿಗೊಲಿದ ಗೋವಿಂದ” ಕಿರುನಾಟಕ ಪ್ರದರ್ಶನ ಹಾಗೂ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಕು| ಸ್ಮಿತಾ ಸ್ವಾಗತಿಸಿ, ಕು|ಜಿತೀಕ್ಷ ನಿರೂಪಿಸಿ ಧನ್ಯವಾದವಿತ್ತರು.

Related posts

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya
error: Content is protected !!