29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ನಡ: ಎಸ್. ಎಸ್ ಎಫ್. ಕರ್ನಾಟಕ ಇದರ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಕೊಡಂಗೇರಿಯಲ್ಲಿ ನ. 16 ಮತ್ತು 17ರಂದು ನಡೆದ “ರಾಜ್ಯಮಟ್ಟದ ಸಾಹಿತ್ಯೋತ್ಸವ 2024” ಇದರಲ್ಲಿ ನಡ ಗ್ರಾಮದ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಹಾಗೂ ಎಸ್. ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕರ್ನಾಟಕದ ಸುಮಾರು 23 ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಸಯ್ಯದ್ ಮುಹಮ್ಮದ್ ಉವೈಸ್ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಗೋವಾದಲ್ಲಿ ಜರಗಲಿರುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.

ಇವರು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಳೆದ ವರ್ಷ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರಿಗೆ,ಶಾಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಗೌರವವನ್ನು ತಂದು ಕೊಟ್ಟಿದ್ದರು. ಇವರು ಮಂಜೊಟ್ಟಿಯ ಸಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರ್ ಶಬ ದಂಪತಿಯ ಪುತ್ರ.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya
error: Content is protected !!