ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ನಡ: ಎಸ್. ಎಸ್ ಎಫ್. ಕರ್ನಾಟಕ ಇದರ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಕೊಡಂಗೇರಿಯಲ್ಲಿ ನ. 16 ಮತ್ತು 17ರಂದು ನಡೆದ “ರಾಜ್ಯಮಟ್ಟದ ಸಾಹಿತ್ಯೋತ್ಸವ 2024” ಇದರಲ್ಲಿ ನಡ ಗ್ರಾಮದ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಹಾಗೂ ಎಸ್. ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕರ್ನಾಟಕದ ಸುಮಾರು 23 ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಸಯ್ಯದ್ ಮುಹಮ್ಮದ್ ಉವೈಸ್ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಗೋವಾದಲ್ಲಿ ಜರಗಲಿರುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.

ಇವರು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಳೆದ ವರ್ಷ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರಿಗೆ,ಶಾಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಗೌರವವನ್ನು ತಂದು ಕೊಟ್ಟಿದ್ದರು. ಇವರು ಮಂಜೊಟ್ಟಿಯ ಸಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರ್ ಶಬ ದಂಪತಿಯ ಪುತ್ರ.

Related posts

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya
error: Content is protected !!