23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ನಡ: ಎಸ್. ಎಸ್ ಎಫ್. ಕರ್ನಾಟಕ ಇದರ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಕೊಡಂಗೇರಿಯಲ್ಲಿ ನ. 16 ಮತ್ತು 17ರಂದು ನಡೆದ “ರಾಜ್ಯಮಟ್ಟದ ಸಾಹಿತ್ಯೋತ್ಸವ 2024” ಇದರಲ್ಲಿ ನಡ ಗ್ರಾಮದ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಹಾಗೂ ಎಸ್. ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕರ್ನಾಟಕದ ಸುಮಾರು 23 ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಸಯ್ಯದ್ ಮುಹಮ್ಮದ್ ಉವೈಸ್ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಗೋವಾದಲ್ಲಿ ಜರಗಲಿರುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.

ಇವರು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಳೆದ ವರ್ಷ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರಿಗೆ,ಶಾಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಗೌರವವನ್ನು ತಂದು ಕೊಟ್ಟಿದ್ದರು. ಇವರು ಮಂಜೊಟ್ಟಿಯ ಸಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರ್ ಶಬ ದಂಪತಿಯ ಪುತ್ರ.

Related posts

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya
error: Content is protected !!