September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ನ.18ರಂದು ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಆಸ್ಪತ್ರೆಯ ಕ್ಷೇಮ ಹಾಲ್‌ನಲ್ಲಿ ಶುಭಾರಂಭಗೊಂಡಿತು.

ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ ಸೀತಾರಾಮ ತೋಳ್ಪಾಡಿತ್ತಾಯ ಇವರ ನೇತೃತ್ವದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ, ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯಾದ ಡಾ| ಕೆ. ವಿದ್ಯಾಕುಮಾರಿ, ಐ.ಎ.ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ದೀಪ ಪ್ರಜ್ವಲನೆ ಮಾಡಿದ ನಂತರ ತಮ್ಮ ಶುಭನುಡಿಗಳಲ್ಲಿ ಪ್ರಕೃತಿ ಮೂಲದಿಂದ ನಮ್ಮನ್ನು ಉಪಚರಿಸುವ ಹಾಗೂ ಜೀವನ ಶೈಲಿಗೆ ಒತ್ತು ಕೊಡುವ ಔಷಧಿರಹಿತ ವೈದ್ಯಕೀಯ ಪದ್ಧತಿಯಾದ ಪ್ರಕೃತಿ ಚಿಕಿತ್ಸೆಗೆ ಮನ್ನಣೆ ನೀಡೋಣ ಎಂದು ಹೇಳಿದರು. ತಪಸ್ಯ ಮಿತ್ರ ಫೌಂಡೇಶನ್ ಇದರ ಸಹ ಸಂಸ್ಥಾಪಕ ಡಾ.ದ್ವಾರಕನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತಮ್ಮ ನುಡಿಗಳಲ್ಲಿ ತಮ್ಮದೇ ಜೀವನದ ಅನುಭವಗಳನ್ನು ಹಂಚಿಕೊಂಡು, ಪ್ರಕೃತಿದತ್ತವಾದ ಪಥ್ಯಾಹಾರ ಸೇವನೆಯ ವಿಶೇಷ ಮಾಹಿತಿಯನ್ನು ನೀಡಿದರು. ಜಿಲ್ಲಾಧಿಕಾರಿಯವರನ್ನು ಸಂಸ್ಥೆಯ ವತಿಯಿಂದ ಕಾರ್ಯದರ್ಶಿಯವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಡಾ.ದ್ವಾರಕನಾಥ್ ರವರನ್ನು ಗೌರವಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ ಆಸ್ಪತ್ರೆಯ ಮುಖ್ಯವೈದ್ಯಾಧಿಕಾಗಳಾಗಿರುವ ಡಾ.ಗೋಪಾಲ ಪೂಜಾರಿಯವರು ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಹಿನ್ನಲೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಯವರು 2024ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾಯರವರನ್ನು ಗೌರವಿಸಿದರು. ಡಾ.ಅಜಿತ್ ನೇತೃತ್ವದಲ್ಲಿ ಕಿರಿಯ ವೈದ್ಯರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಯೋಗ ಪ್ರಾತ್ಯಕ್ಷಿತೆ ನಡೆಯಿತು. ಆಡಳಿತ ವಿಭಾಗದ ಸಿಬ್ಬಂದಿಗಳು ಪ್ರಾರ್ಥನೆ ಹಾಡುವ ಮುಖೇನ ಆರಂಭವಾದ ಸಭಾ ಕಾರ್ಯಕ್ರಮದಲ್ಲಿ ಸ್ಥಾನಿಕ ವೈದ್ಯಾಧಿಕಾರಿಯಾದ ಡಾ.ಶೋಭಿತ್ ಶೆಟ್ಟಿಯವರು ಸ್ವಾಗತಿಸಿ ಪ್ರಸ್ತಾವನೆಯನ್ನು ಸಲ್ಲಿಸಿದರು. ಡಾ. ಪೂಜಾ ಜಿ ಎಸ್ ಕಾರ್ಯಕ್ರಮವನ್ನು ನಿರೂಪಿಸಿ ಡಾ. ಅನ್ವಿತ ಯು ಧನ್ಯವಾದವನ್ನಿತ್ತರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಮುಂಡಾಜೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya
error: Content is protected !!