25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

ನಾರಾವಿ : ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳು ನಾರಾವಿ ಒಟ್ಟು ಸೇರಿ ನ. 14ರಂದು ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಎಂಬ ವಿಶಿಷ್ಟ ರೀತಿಯ ಕಾರ್ಯಕ್ರಮವನ್ನು ತುಂಬಾ ಅದ್ದೂರಿಯಿಂದ ಆಚರಿಸಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮವಾದ ಡ್ರಾಮಾ ಜೂನಿಯರ್ಸ್ ನ ಫೈನಲಿಸ್ಟ್ ಪುಟಾಣಿ ಅಪೂರ್ವ ಮಾಳ ಇವರು “ಮಕ್ಕಳು ನಿಂತ ನೀರಾಗಬಾರದು. ತಂದೆ ತಾಯಿಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ನನ್ನ ಸಾಧನೆಗೆ ನನ್ನ ಹೆತ್ತವರೇ ಸಂಪೂರ್ಣ ಕಾರಣಕರ್ತರು” ಎಂದರು.


ಅಧ್ಯಕ್ಷತೆಯನ್ನು ವಹಿಸಿದ್ದ ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ| ಸ್ವಾ ಜೆರೋಮ್ ಡಿ’ಸೋಜಾ “ಕ್ರೀಡೆಯಿಂದ ಮಾತ್ರ ಒಗ್ಗಟ್ಟು ಮೂಡಲು ಸಾಧ್ಯವಿದೆ” ಎಂದರು.


ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಲ್ವಿನ್ ಸೆರಾವೋ, ನಾರಾವಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಂಜಯ್ ಮಿರಾಂದ ಹಾಗೂ ಕಾರ್ಯದರ್ಶಿಯಾದ ಶ್ರೀಮತಿ ಎವ್ಜಿನ್ ರೋಡ್ರಿಗಸ್, ನಾರಾವಿ ಪ್ರೌಢಶಾಲೆ ನಾರಾವಿ ಇಲ್ಲಿನ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲಿಲ್ಲಿ ಪಾಯ್ಸ್, ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸೋಫಿಯಾ ಫೆರ್ನಾಂಡಿಸ್, ಸಂತ ಪಾವ್ಲರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಸುಪ್ರಿತಾ ಕ್ರಾಸ್ತಾ ಉಪಸ್ಥಿತರಿದ್ದರು. ಸಂತ ಅಂತೋನಿ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಅವಿಲ್ ಮೋರಸ್ ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.


ಸಂತ ಅಂತೋನಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರದೀಪ್ ಬಿ ಇವರ ನಿರ್ದೇಶನದಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ವಿಶೇಷ ರೀತಿಯ ಬೇರೆ ಬೇರೆ ಆಟೋಟ ಸ್ಪರ್ಧೆಗಳು ನಡೆದವು. ಪ್ರೊ. ಕಬಡ್ಡಿ ಮಾದರಿಯಲ್ಲಿ ನಡೆದ ಕಬ್ಬಡಿ ಪಂದ್ಯಾಟ ಹಾಗೂ ತ್ರೋಬಾಲ್ ಪಂದ್ಯಾಟವು ಎಲ್ಲರ ಗಮನವನ್ನು ಸೆಳೆಯಿತು. ಸಂತ ಪಾವ್ಲರ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಹೇಶ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಬಿ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವಿತ್ತರು.

Related posts

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya
error: Content is protected !!