24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya
error: Content is protected !!