22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೇರಳದ ನಕ್ಸಲ್ ರೂಪೇಶ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!