September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಕಕ್ಯಪದವು ಎಲ್.ಸಿ.ಆರ್.‌ ಇಂಡಿಯನ್‌ ಪದವಿ ಕಾಲೇಜಿನ ಆರನೇ ಚತುರ್ಮಾಸದ ಅತ್ಯುತ್ತಮ ಫಲಿತಾಂಶ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!