30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ನಡ: ಎಸ್. ಎಸ್ ಎಫ್. ಕರ್ನಾಟಕ ಇದರ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಕೊಡಂಗೇರಿಯಲ್ಲಿ ನ. 16 ಮತ್ತು 17ರಂದು ನಡೆದ “ರಾಜ್ಯಮಟ್ಟದ ಸಾಹಿತ್ಯೋತ್ಸವ 2024” ಇದರಲ್ಲಿ ನಡ ಗ್ರಾಮದ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಹಾಗೂ ಎಸ್. ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕರ್ನಾಟಕದ ಸುಮಾರು 23 ಜಿಲ್ಲೆಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದ್ದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಸಯ್ಯದ್ ಮುಹಮ್ಮದ್ ಉವೈಸ್ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಗೋವಾದಲ್ಲಿ ಜರಗಲಿರುವ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.

ಇವರು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಳೆದ ವರ್ಷ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತನ್ನ ಹೆತ್ತವರಿಗೆ,ಶಾಲೆಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಗೌರವವನ್ನು ತಂದು ಕೊಟ್ಟಿದ್ದರು. ಇವರು ಮಂಜೊಟ್ಟಿಯ ಸಯ್ಯದ್ ಅಯ್ಯುಬ್ ಹಾಗೂ ಶ್ರೀಮತಿ ನೂರ್ ಶಬ ದಂಪತಿಯ ಪುತ್ರ.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya
error: Content is protected !!