25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ 71ನೇ ಅಖಿಲ ಭಾರತ ಸಪ್ತಾಹ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಉತ್ತಮ ಸಹಕಾರ ಸಂಘಗಳಿಗೆ ನೀಡುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಸಂಘ ‘ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ’ಯಿಂದ ಪುರಸ್ಕೃತಗೊಂಡಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್‌,ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷಣ ಸಂಗಪ್ಪ ಸವದಿ ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆಗಾಗಿ 2024ನೇ ಸಾಲಿನ ‘ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಎಸ್ ಜಯರಾಮ್ ಶೆಟ್ಟಿ ಅವರಿಗೆ ನೀಡಿ ಗೌರವಿಸಿದರು.

ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ 20 ವರ್ಷಗಳಿಂದ ಸುಮಾರು 19 ಶಾಖೆಗಳನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ಸಂಘವು ರೂ 720 ಕೋಟಿ ವ್ಯವಹಾರ ನಡೆಸಿ ರೂ 2.50 ಕೋಟಿ ಲಾಭ ಗಳಿಸಿದೆ.

ಕಾರ್ಯಕ್ರಮದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದ‌ರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ ವೈ., ಯಶ್‌ಪಾಲ್ ಸುವರ್ಣ, ಮೇಯರ್ ಮನೋಜ್ ಕುಮಾರ್, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮತ್ತಿತರರು ಇದ್ದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಂ.ಜಿ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ರಘುರಾಮ‌ ಶೆಟ್ಟಿ, ಜಯಂತ್ ಶೆಟ್ಟಿ, ಸೀತರಾಮ‌ ಶೆಟ್ಟಿ, ಬಾಲಕೃಷ್ಣ ಪೂಂಜ, ಜಯರಾಮ ಭಂಡಾರಿ, ಅಂಭಾ ಬಿ ಆಳ್ವಾ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!