25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya
error: Content is protected !!