September 6, 2026
ಗ್ರಾಮಾಂತರ ಸುದ್ದಿ

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

ಬೆಳ್ತಂಗಡಿ: ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆಯನ್ನು ಅತ್ಯಂತ ವಿಶೇಷವಾಗಿ ಇಂದು ಬೆಳ್ತಂಗಡಿ ನಗರದ ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ನಡೆಸಲಾಯಿತು.

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನಗರ ಮತ್ತು ಗ್ರಾಮೀಣ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಿತು. ವೃದ್ಧಾಶ್ರಮ ನಿವಾಸಿಗಳಿಗೆ ಹಣ್ಣುಹಂಪಲು ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿದ್ದರೂ ಅನಾಥಶ್ರಮ ಸೇರಿರುವ ನಿವಾಸಿಗಳು ತಮ್ಮ ದುಃಖ , ಸಂತೋಷವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷೆ ತನುಜಾ ಶೇಖರ್ , ಮಾಜಿ ತಾ.ಪಂ ಸದಸ್ಯೆಯರಾದ ಕೇಶವತಿ , ಸುಶೀಲಾ , ಜಯಶೀಲ , ಮಹಿಳಾ ನಗರ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ , ಬಾರ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್ , ಕಳಿಯ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ , ಶ್ವೇತಾ , ಮೋಹಿನಿ ಮಾಲಾಡಿ ಪಂಚಾಯತ್ ಸದಸ್ಯರಾದ ಸೆಬೆಸ್ಟೀನ್ ಡಿಸೋಜ , ವಿದ್ಯಾ , ರುಬೀನಾ , ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ ಅಟ್ರಿಂಜೆ , ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸೌಮ್ಯ ಲಾಯಿಲ , ಮಹಿಳಾ ಘಟಕದ ಪದಾಧಿಕಾರಿಗಳಾದ ಮಧುರ , ಸುಪ್ರೀಯಾ , ಪ್ರಮೀಳಾ , ನೇಹಾ , ವೃದ್ಧಾಶ್ರಮದ ಮುಖ್ಯಸ್ಥೆ ಸಿಸ್ಟರ್ ಪಾವನಾ ಉಪಸ್ಥಿತರಿದ್ದರು.

Related posts

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಸಾಮೂಹಿಕ ತುಳಸಿ ನಾಮಾರ್ಚನೆ”

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya
error: Content is protected !!