39.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ನ.20 ರಂದು ಇಂದ್ರಪ್ರಸ್ಥ ಆಡಿಟೋರಿಯಂ ನಲ್ಲಿ ನಡೆಯಿತು.

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲನೆಯನ್ನು ನೆರವೇರಿಸಿ ಮಾತನಾಡಿ, ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು ನಿಮ್ಮ ಹಿನ್ನೆಲೆಯನ್ನು ಬಿಟ್ಟು, ಏಕ ಮನಸ್ಕರಾಗಿ, ಏಕ ಸಂಸ್ಕಾರವನ್ನು ಹೊಂದಿ, ಈ ಸಂಸ್ಥೆಗೆ ಹೊಂದಿಕೊಂಡು ಹೋಗುವಂತಹ ಅನಿವಾರ್ಯತೆ ಇದೆ. ಇಂಜಿನಿಯರಿಂಗ್ ಬಹಳ ಬೆಲೆ ಬಾಳುವಂತಹ ಕೋರ್ಸ್ ಆಗಿದ್ದು, ಕಷ್ಟ ಪಟ್ಟು ಓದುವಂತಹ ಜವಾಬ್ದಾರಿ ವಿದ್ಯಾರ್ಥಿಗಳಲ್ಲಿದೆ. ಸಂಸ್ಥೆಯಲ್ಲಿರುವಂತಹ ಪ್ರಯೋಗಾಲಯ ಹಾಗೂ ಗ್ರಂಥಾಲಯವನ್ನು ಸದುಪಯೋಗ ಪಡಿಸಿಕೊಳ್ಳುವುದರ ಮೂಲಕ ಪ್ರಾಯೋಗಿಕ ಕೌಶಲ್ಯವನ್ನು ಹಾಗೂ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಿ ಎಂದು ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಡಾ. ವಿದ್ಯಾ ಕೆ. ಹಾಗೂ ನಿಶ್ಮಿತಾ ಎಂ. ನಿರೂಪಿಸಿದರು. ಗೌತಮಿ, ಕೀರ್ತನಾ ಪ್ರಾರ್ಥಿಸಿದರು. ಪ್ರಥಮ ವರ್ಷದ ಸಂಯೋಜಕ ಡಾ. ರವೀಶ್ ಪಡುಮಲೆ ವಂದಿಸಿದರು.

Related posts

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya
error: Content is protected !!