September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮಂಗಳೂರು ಸಂಸ್ಥೆಯು ತನ್ನ ಶತಮಾನೋತ್ಸವ ಇದರ ಸವಿನೆನಪಿಗಾಗಿ ನೂತನ ಕಟ್ಟಡ ಉದ್ಘಾಟನೆಯನ್ನು ಸಾಂಕೇತಿಕವಾಗಿ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಗೆ ವಿಶೇಷ ಪ್ರೋತ್ಸಾಹ ,ಸಲಹೆ ಸೂಚನೆ , ಕಾರ್ಯಕ್ರಮ ನಡೆಸಲು ಸ್ಥಳಾವಕಾಶ , ಹಾಗೂ ಸಹಕಾರ ನೀಡುತ್ತಾ ಬಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ ಸಂಸ್ಥೆಯ ಕಾರ್ಯದರ್ಶಿಯವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯು ಗೌರವಿಸಿ ಸನ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪರವಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಬಿ.ಎ ಕುಮಾರ್ ಹೆಗ್ಡೆ ಯವರನ್ನು ನ. 19 ರಂದು ಮಂಗಳೂರಿನ ಪಿಲಿಕುಲದಲ್ಲಿ ನಡೆದ ಸಭಾರಂಭದಲ್ಲಿ ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂಧ್ಯಾ , ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತರಾದ ಡಾ ಮೋಹನ್ ಆಳ್ವ ರಾಜ್ಯ ಸಂಸ್ಥೆಯ ಕಾರ್ಯದರ್ಶಿ, ಗಂಗಪ್ಪ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ ಜಿಲ್ಲಾ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ, ಮಡಿಕೇರಿ ಜಿಲ್ಲಾ ಸ್ಕೌಟ್ ಗೈಡ್ಸ್ ಆಯುಕ್ತಾರಾದ ಬೇಬಿ ಮ್ಯಾಥ್ಯ್ , ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ಭಟ್, ಜಿಲ್ಲಾ ಸ್ಕೌಟ್ ಆಯುಕ್ತರಾದ ಬಿ ಎಂ ತುಂಬೆ ಜಿಲ್ಲಾಕಾರ್ಯದರ್ಶಿ ಪ್ರತಿಮ್ ಮೊದಲಾದವರು ಉಪಸ್ಥಿತರಿದ್ದ ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಶಿಕ್ಷಣ ಸಂಸ್ಥೆ ಯನ್ನು ಗೌರವಿಸಿ ಸನ್ಮಾನಿಸಿದರು.

Related posts

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!