25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನ. 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐಟಿಐ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾವಳಿಯ ತ್ರೋಬಾಲ್ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಪ್ರಥಮ ಸ್ಥಾನ ಗಳಿಸಿದೆ.

ಪಂದ್ಯದಲ್ಲಿ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವಾಮಂಜೂರಿನ ಎಸ್.ಡಿ.ಎಂ. ಮಂಗಳಜ್ಯೋತಿ ಐಟಿಐ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ಪ್ರಥಮ ಸ್ಥಾನ ವಿಜೇತ ತಂಡಕ್ಕೆ ಟ್ರೋಫಿಯೊಂದಿಗೆ 3,000 ರೂ. ನಗದು ಬಹುಮಾನ ಲಭಿಸಿದ್ದು, ಲಾವಣ್ಯಾ ‘ಉತ್ತಮ ಎಸೆತಗಾರ್ತಿ’ ಹಾಗೂ ಮಂಜುಳಾ ‘ಆಲ್ ರೌಂಡರ್’ ಪ್ರಶಸ್ತಿ ಪಡೆದಿದ್ದಾರೆ.


ವಿದ್ಯಾರ್ಥಿನಿಯರನ್ನು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ವೀ. ಹೆಗ್ಗಡೆ, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.

Related posts

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya
error: Content is protected !!