July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

ನ್ಯಾಯತರ್ಪು : ಇಲ್ಲಿನ ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕ ನಗರ ಭಜನೆ ಕಾರ್ಯಕ್ರಮಕ್ಕೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಭಂದಕ ಗಿರೀಶ್ ಶೆಟ್ಟಿ ಗೇರುಕಟ್ಟೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಹಿಂದೂ ಸನಾತನ ಧರ್ಮದ ಮೂಲ ಭಜನೆ. ಕಳೆದ 25 ವರ್ಷಗಳಿಂದ ಪ್ರತಿ ವರ್ಷವೂ ಭಜನ ಮಂಡಳಿ ಆಸುಪಾಸಿನಲ್ಲಿ 1 ವಾರಗಳ ಕಾಲ ಸಂಜೆ ಸಮಯದಲ್ಲಿ ಪ್ರತಿ ಮನೆ, ಮನೆಗೆ ಭೇಟಿ ನೀಡುವ ಮೂಲಕ ಧರ್ಮ ಮತ್ತು ದೇವರ ಸಂಕಿರ್ತನೆಯನ್ನು ಹಾಡುವ ಜೊತೆಗೆ ಭಕ್ತಿ, ಧಾರ್ಮಿಕ ಚಿಂತನೆಯಲ್ಲಿ ಯುವಕರನ್ನು ಹಾಗೂ ಮಕ್ಕಳನ್ನು ತೊಡಗಿಸಿಕೊಂಡಾಗ ಮುಂದಿನ ಪೀಳಿಗೆಗೆ ಧರ್ಮ ಜಾಗೃತಿಯಾಗಲು ಮಾದರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಭಜನಾ ಮಂಡಳಿಯ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು. ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸಿಬ್ಬಂದಿ ಜಯರಾಮ ಭಟ್, ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ. ಕಾರ್ಯದರ್ಶಿ ಯೋಗೀಶ್ ಎಮ್., ಭಜನಾ ಮಂಡಳಿ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಉಮೇಶ್ ಕೇಲ್ದಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!