ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

ನ್ಯಾಯತರ್ಪು : ಇಲ್ಲಿನ ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕ ನಗರ ಭಜನೆ ಕಾರ್ಯಕ್ರಮಕ್ಕೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಭಂದಕ ಗಿರೀಶ್ ಶೆಟ್ಟಿ ಗೇರುಕಟ್ಟೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಹಿಂದೂ ಸನಾತನ ಧರ್ಮದ ಮೂಲ ಭಜನೆ. ಕಳೆದ 25 ವರ್ಷಗಳಿಂದ ಪ್ರತಿ ವರ್ಷವೂ ಭಜನ ಮಂಡಳಿ ಆಸುಪಾಸಿನಲ್ಲಿ 1 ವಾರಗಳ ಕಾಲ ಸಂಜೆ ಸಮಯದಲ್ಲಿ ಪ್ರತಿ ಮನೆ, ಮನೆಗೆ ಭೇಟಿ ನೀಡುವ ಮೂಲಕ ಧರ್ಮ ಮತ್ತು ದೇವರ ಸಂಕಿರ್ತನೆಯನ್ನು ಹಾಡುವ ಜೊತೆಗೆ ಭಕ್ತಿ, ಧಾರ್ಮಿಕ ಚಿಂತನೆಯಲ್ಲಿ ಯುವಕರನ್ನು ಹಾಗೂ ಮಕ್ಕಳನ್ನು ತೊಡಗಿಸಿಕೊಂಡಾಗ ಮುಂದಿನ ಪೀಳಿಗೆಗೆ ಧರ್ಮ ಜಾಗೃತಿಯಾಗಲು ಮಾದರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಭಜನಾ ಮಂಡಳಿಯ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು. ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸಿಬ್ಬಂದಿ ಜಯರಾಮ ಭಟ್, ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ. ಕಾರ್ಯದರ್ಶಿ ಯೋಗೀಶ್ ಎಮ್., ಭಜನಾ ಮಂಡಳಿ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಉಮೇಶ್ ಕೇಲ್ದಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!