23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.೨೦ರಂದು ಸಂಜೆ ನಡೆದಿದೆ.

ಹಲ್ಲೆಗೊಳಗಾದ ಮಹೇಂದ್ರ ಅವರ ತಲೆಗೆ ಗಂಭೀರ ಏಟು ತಗಲಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಹೇಂದ್ರ ಅವರು ತನ್ನ ಮೊಬೈಲ್‌ನ್ನು ಶೌಚಾಲಯದ ಒಳಗಿಟ್ಟು, ಸ್ವಚ್ಛತೆಗೊಳಿಸುತ್ತಿದ್ದ ಸಂದರ್ಭ ದೇವಸ್ಥಾನಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದವರು ಹಲ್ಲೆ ನಡೆಸಿದರೆನ್ನಲಾಗಿದೆ. ಘಟನೆಗೆ ಸ್ವಷ್ಟ ಕಾರಣ ತಿಳಿದು ಬಂದಿಲ್ಲ, ಆದರೆ ಶೌಚಾಲಯದಲ್ಲಿ ಮೊಬೈಲ್ ಇರುವುದನ್ನು ಕಂಡ ಯಾತ್ರಾರ್ಥಿಗಳು ವಿಡಿಯೋ ಮಾಡುತ್ತಿದ್ದಾನೆ ಎಂದು ಸಂಶಯಿಸಿ ಹಲ್ಲೆ ನಡೆಸಿದ್ದರೆನ್ನಲಾಗಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಲ್ಲೆ ನಡೆಸಿದವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Related posts

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya
error: Content is protected !!