25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮಂಗಳೂರು ಸಂಸ್ಥೆಯು ತನ್ನ ಶತಮಾನೋತ್ಸವ ಇದರ ಸವಿನೆನಪಿಗಾಗಿ ನೂತನ ಕಟ್ಟಡ ಉದ್ಘಾಟನೆಯನ್ನು ಸಾಂಕೇತಿಕವಾಗಿ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಗೆ ವಿಶೇಷ ಪ್ರೋತ್ಸಾಹ ,ಸಲಹೆ ಸೂಚನೆ , ಕಾರ್ಯಕ್ರಮ ನಡೆಸಲು ಸ್ಥಳಾವಕಾಶ , ಹಾಗೂ ಸಹಕಾರ ನೀಡುತ್ತಾ ಬಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ ಸಂಸ್ಥೆಯ ಕಾರ್ಯದರ್ಶಿಯವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯು ಗೌರವಿಸಿ ಸನ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪರವಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಬಿ.ಎ ಕುಮಾರ್ ಹೆಗ್ಡೆ ಯವರನ್ನು ನ. 19 ರಂದು ಮಂಗಳೂರಿನ ಪಿಲಿಕುಲದಲ್ಲಿ ನಡೆದ ಸಭಾರಂಭದಲ್ಲಿ ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂಧ್ಯಾ , ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತರಾದ ಡಾ ಮೋಹನ್ ಆಳ್ವ ರಾಜ್ಯ ಸಂಸ್ಥೆಯ ಕಾರ್ಯದರ್ಶಿ, ಗಂಗಪ್ಪ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ ಜಿಲ್ಲಾ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ, ಮಡಿಕೇರಿ ಜಿಲ್ಲಾ ಸ್ಕೌಟ್ ಗೈಡ್ಸ್ ಆಯುಕ್ತಾರಾದ ಬೇಬಿ ಮ್ಯಾಥ್ಯ್ , ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ಭಟ್, ಜಿಲ್ಲಾ ಸ್ಕೌಟ್ ಆಯುಕ್ತರಾದ ಬಿ ಎಂ ತುಂಬೆ ಜಿಲ್ಲಾಕಾರ್ಯದರ್ಶಿ ಪ್ರತಿಮ್ ಮೊದಲಾದವರು ಉಪಸ್ಥಿತರಿದ್ದ ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಶಿಕ್ಷಣ ಸಂಸ್ಥೆ ಯನ್ನು ಗೌರವಿಸಿ ಸನ್ಮಾನಿಸಿದರು.

Related posts

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya
error: Content is protected !!