September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನ. 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐಟಿಐ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾವಳಿಯ ತ್ರೋಬಾಲ್ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಪ್ರಥಮ ಸ್ಥಾನ ಗಳಿಸಿದೆ.

ಪಂದ್ಯದಲ್ಲಿ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವಾಮಂಜೂರಿನ ಎಸ್.ಡಿ.ಎಂ. ಮಂಗಳಜ್ಯೋತಿ ಐಟಿಐ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ಪ್ರಥಮ ಸ್ಥಾನ ವಿಜೇತ ತಂಡಕ್ಕೆ ಟ್ರೋಫಿಯೊಂದಿಗೆ 3,000 ರೂ. ನಗದು ಬಹುಮಾನ ಲಭಿಸಿದ್ದು, ಲಾವಣ್ಯಾ ‘ಉತ್ತಮ ಎಸೆತಗಾರ್ತಿ’ ಹಾಗೂ ಮಂಜುಳಾ ‘ಆಲ್ ರೌಂಡರ್’ ಪ್ರಶಸ್ತಿ ಪಡೆದಿದ್ದಾರೆ.


ವಿದ್ಯಾರ್ಥಿನಿಯರನ್ನು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ವೀ. ಹೆಗ್ಗಡೆ, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.

Related posts

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya
error: Content is protected !!