25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನ. 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐಟಿಐ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾವಳಿಯ ತ್ರೋಬಾಲ್ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಪ್ರಥಮ ಸ್ಥಾನ ಗಳಿಸಿದೆ.

ಪಂದ್ಯದಲ್ಲಿ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವಾಮಂಜೂರಿನ ಎಸ್.ಡಿ.ಎಂ. ಮಂಗಳಜ್ಯೋತಿ ಐಟಿಐ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ಪ್ರಥಮ ಸ್ಥಾನ ವಿಜೇತ ತಂಡಕ್ಕೆ ಟ್ರೋಫಿಯೊಂದಿಗೆ 3,000 ರೂ. ನಗದು ಬಹುಮಾನ ಲಭಿಸಿದ್ದು, ಲಾವಣ್ಯಾ ‘ಉತ್ತಮ ಎಸೆತಗಾರ್ತಿ’ ಹಾಗೂ ಮಂಜುಳಾ ‘ಆಲ್ ರೌಂಡರ್’ ಪ್ರಶಸ್ತಿ ಪಡೆದಿದ್ದಾರೆ.


ವಿದ್ಯಾರ್ಥಿನಿಯರನ್ನು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ವೀ. ಹೆಗ್ಗಡೆ, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.

Related posts

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!