April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

ಬೆಳ್ತಂಗಡಿ: ಕರ್ನಾಟಕ ರಾಜ್ಯದಲ್ಲಿ 21 ವರ್ಷಗಳ ಹಿಂದೆ ಕಾರ್ಕಳ ತಾಲೂಕಿನ ಈದುವಿನಲ್ಲಿ ನಡೆದ ಎನ್ ಕೌಂಟರ್ ಬಳಿಕ ಹತ್ತಾರು ನಕ್ಸಲ್ ಎನ್ ಕೌಂಟರ್ ನಡೆದಿದೆ. ಯಾವುದೇ ಎನ್ ಕೌಂಟರ್ ನಡೆಸುವ ಮೊದಲು ಯಾವುದೇ ಮನೆಯನ್ನು ತೆರವು ಮಾಡಿದ ಇತಿಹಾಸವಿಲ್ಲ. ಆದರೆ ವಿಕ್ರಮ್ ಗೌಡ ಎನ್ ಕೌಂಟರ್ ನಲ್ಲಿ ಮಾತ್ರ ಎನ್ ಕೌಂಟರ್ ಮೊದಲು ಸ್ಥಳೀಯ ಮನೆಯವರನ್ನು ತೆರವು ಮಾಡಿದ ಎರಡು ದಿನಗಳ ನಂತರ ಎನ್ ಕೌಂಟರ್ ನಡೆಸಿದ ಘಟನೆ ಸಂಶಯಕ್ಕೆ ಕಾರಣವಾಗಿದೆ. ಎನ್ ಕೌಂಟರ್ ನಡೆದ ಸ್ಥಳಕ್ಕೆ ಪತ್ರಿಕೆ , ಟಿವಿ ಮಾದ್ಯಮದವರನ್ನು ಪ್ರವೇಶ ನೀಡದೆ , ಶವವನ್ನು ನೋಡಲು ನಕ್ಸಲ್ ನಿಗ್ರಹ ದಳ ಬಿಡಲಿಲ್ಲ. ಮನೆಯೊಂದರಲ್ಲಿ ಎನ್ ಕೌಂಟರ್ ನಡೆದಿದೆ ಎನ್ನುವ ಪೋಲಿಸ್ ಇಲಾಖೆಯ ಹೇಳಿಕೆ ಇನ್ನೊಂದು ರೀತಿಯಲ್ಲಿ ಸಂಶಯಕ್ಕೆ ಕಾರಣವಾಗಿದೆ. ನಕ್ಸಲರು ನಡೆಸಿದ ಪ್ರತಿದಾಳಿಯಲ್ಲಿ ಪೋಲಿಸರಿಗೆ ಗಾಯವಾಗಿಲ್ಲ. ನಕ್ಸಲರ ಪ್ರತಿದಾಳಿಯ ಗುಂಡು ಯಾವುದಕ್ಕೆ ತಗುಲಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ರಾಜ್ಯದ ನಕ್ಸಲ್ ನಿಗ್ರಹ ದಳ ಇರುವಾಗ, ಎನ್ ಕೌಂಟರ್ ನಡೆಯುವ ಮೊದಲು ಕೇಂದ್ರ ಸಶಸ್ತ್ರ ಪಡೆಗಳನ್ನು ಕರೆಸಿಕೊಂಡಿದ್ದು ಏಕೆ ? ಎನ್ ಕೌಂಟರ್ ನಡೆಸಿದ್ದು ನಕ್ಸಲ್ ನಿಗ್ರಹ ದಳವೋ ಅಥವಾ ಕೇಂದ್ರ ಸಶಸ್ತ್ರ ಪಡೆಯೋ ಎಂಬ ಅನುಮಾನದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬೆಳ್ತಂಗಡಿ ಹೋರಾಟಗಾರ ಶೇಖರ್ ಲಾಯಿಲ ತಿಳಿಸಿದ್ದಾರೆ.

Related posts

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!