25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

ನ್ಯಾಯತರ್ಪು : ಇಲ್ಲಿನ ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕ ನಗರ ಭಜನೆ ಕಾರ್ಯಕ್ರಮಕ್ಕೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಭಂದಕ ಗಿರೀಶ್ ಶೆಟ್ಟಿ ಗೇರುಕಟ್ಟೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಹಿಂದೂ ಸನಾತನ ಧರ್ಮದ ಮೂಲ ಭಜನೆ. ಕಳೆದ 25 ವರ್ಷಗಳಿಂದ ಪ್ರತಿ ವರ್ಷವೂ ಭಜನ ಮಂಡಳಿ ಆಸುಪಾಸಿನಲ್ಲಿ 1 ವಾರಗಳ ಕಾಲ ಸಂಜೆ ಸಮಯದಲ್ಲಿ ಪ್ರತಿ ಮನೆ, ಮನೆಗೆ ಭೇಟಿ ನೀಡುವ ಮೂಲಕ ಧರ್ಮ ಮತ್ತು ದೇವರ ಸಂಕಿರ್ತನೆಯನ್ನು ಹಾಡುವ ಜೊತೆಗೆ ಭಕ್ತಿ, ಧಾರ್ಮಿಕ ಚಿಂತನೆಯಲ್ಲಿ ಯುವಕರನ್ನು ಹಾಗೂ ಮಕ್ಕಳನ್ನು ತೊಡಗಿಸಿಕೊಂಡಾಗ ಮುಂದಿನ ಪೀಳಿಗೆಗೆ ಧರ್ಮ ಜಾಗೃತಿಯಾಗಲು ಮಾದರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಭಜನಾ ಮಂಡಳಿಯ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು. ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸಿಬ್ಬಂದಿ ಜಯರಾಮ ಭಟ್, ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ. ಕಾರ್ಯದರ್ಶಿ ಯೋಗೀಶ್ ಎಮ್., ಭಜನಾ ಮಂಡಳಿ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಉಮೇಶ್ ಕೇಲ್ದಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!