23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

ಬೆಳ್ತಂಗಡಿ: ನ .14 ರಂದು ಬೆಳ್ತಂಗಡಿ ಗುಂಡೂರಿ ಗ್ರಾಮ.ಶ್ರೀಗುರುಚೈತನ್ಯಸೇವಾಶ್ರಮ ಗುಂಡೂರಿ ಬೆಳ್ತಂಗಡಿ ತಾಲೂಕು ಇಲ್ಲಿ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ನಿವೃತ್ತ ಸರಕಾರಿ ಉದ್ಯೋಗಿ ದಿವಂಗತ ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕ್ಕೂಳ್ಳಲಾಯಿತು.
ಮೃತರು ತನ್ನ 19 ನೇ ವಯಸ್ಸಿನಲ್ಲಿ ಸರಕಾರಿ ಶ್ಯಾನುಭೋಗರಾಗಿ ದುಡಿದು ನಂತರ ಗ್ರಾಮಲೆಕ್ಕಿಗರಾಗಿ ಸರಕಾರಿ ಸೇವೆ ಸಲ್ಲಿಸಿದ್ದಾರೆ.ಈ ಸಂಧರ್ಭದಲ್ಲಿ ಅದೆಷ್ಟೋ ಬಡಕುಟುಂಬಗಳಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಸಿಗುವಂತೆ ಪ್ರಾಮಾಣಿಕ ಪ್ರಯತ್ನಪಟ್ಟವರು.ನಿವೃತ್ತಿ ಜೀವನದಲ್ಲಿ ಧಾರ್ಮಿಕ,ಸಮಾಜಿಕ ಸೇವೆಯಲ್ಲಿ ತೊಡಗಿ ಜನರ ಮದ್ಯೆ ಬೆರೆತವರು, ಪನೋಲಿಬೈಲ್ ಕ್ಷೇತ್ರದ ಅಭಿವೃದ್ಧಿ ಸಮಿತಿಯಲ್ಲಿ ತೊಡಗಿಸಿದ ಇವರು ಕ್ಷೇತ್ರದ ಆಡಳಿತದ ದೋಷದ ವಿರುದ್ದ ನ್ಯಾಯಕ್ಕಾಗಿ ನ್ಯಾಯಾಲಯದಲ್ಲಿ ಹೋರಾಟದಲ್ಲಿ ಇವರ ಹೆಸರು

ಮುಂಚೂಣಿಯಲ್ಲಿದೆ.ಇವನ್ನೆಲ್ಲಾ ಗಮನಿಸಿದ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ಇವರ ಸೇವೆಯನ್ನು ನೆನಪಿಸಿ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಸಲಾಯಿತು ಎಂದು ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ದ ಹೊನ್ನಯ್ಯ ಕುಲಾಲ್ ರವರು ವಿವರಿಸಿದರು. ಈ ಕಾರ್ಯಕ್ರಮ ದ ನಿಮಿತ್ತ ಸೇವಾಶ್ರಮ ದ ಆರಾಧ್ಯ ಗುರು ರಾಯರಿಗೆ ಪೂಜೆ ಸಲ್ಲಿಸಲಾಯಿತು.. ಆಶ್ರಮವಾಸಿಗಳಿಗೆ ಹಾಗು ಬಂದಂತಹ ಸಭಿಕರಿಗೆ ಸಿಹಿಊಟ ಹಂಚಲಾಯಿತು.ಅಥಿತಿಗಳಾಗಿ ಹಿರಿಯರಾದ ನಿವೃತ್ತ ಅಂಚೆ ಸಿಬ್ಬಂದಿ ಅರಂಬೋಡಿ ಕುಂಜ್ಞಪ್ಪ ಕುಲಾಲ್, ಸಿದ್ಧಕಟ್ಟೆ ಜನೌಷದಿ ಮಾಲಕ ಮನೋಜ್ ಕುಲಾಲ್,ನಡ್ತಿಕಲ್ ಸಮಾಜಸೇವಾ ಸಂಘದ ಉಪಾಧ್ಯಕ್ಷೆ ಶ್ರೀಮತಿ ರಮ್ಯಾ ಕುಮಾರ್ ಕುಲಾಲ್, ಸಿದ್ಧಕಟ್ಟೆ ಕುಲಾಲ ಸಂಘದ ಸದಸ್ಯೆ ಶ್ರೀಮತಿ ಉಷಾ ಕೃಷ್ಣ ಕುಲಾಲ್ ಉಪಸ್ಥಿತರಿದ್ದರು.. ಹೊನ್ನಯ್ಯ ಕುಲಾಲ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು

Related posts

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya
error: Content is protected !!