July 23, 2026
Uncategorized

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

ಬೆಳ್ತಂಗಡಿ: ನ .14 ರಂದು ಬೆಳ್ತಂಗಡಿ ಗುಂಡೂರಿ ಗ್ರಾಮ.ಶ್ರೀಗುರುಚೈತನ್ಯಸೇವಾಶ್ರಮ ಗುಂಡೂರಿ ಬೆಳ್ತಂಗಡಿ ತಾಲೂಕು ಇಲ್ಲಿ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ನಿವೃತ್ತ ಸರಕಾರಿ ಉದ್ಯೋಗಿ ದಿವಂಗತ ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕ್ಕೂಳ್ಳಲಾಯಿತು.
ಮೃತರು ತನ್ನ 19 ನೇ ವಯಸ್ಸಿನಲ್ಲಿ ಸರಕಾರಿ ಶ್ಯಾನುಭೋಗರಾಗಿ ದುಡಿದು ನಂತರ ಗ್ರಾಮಲೆಕ್ಕಿಗರಾಗಿ ಸರಕಾರಿ ಸೇವೆ ಸಲ್ಲಿಸಿದ್ದಾರೆ.ಈ ಸಂಧರ್ಭದಲ್ಲಿ ಅದೆಷ್ಟೋ ಬಡಕುಟುಂಬಗಳಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಸಿಗುವಂತೆ ಪ್ರಾಮಾಣಿಕ ಪ್ರಯತ್ನಪಟ್ಟವರು.ನಿವೃತ್ತಿ ಜೀವನದಲ್ಲಿ ಧಾರ್ಮಿಕ,ಸಮಾಜಿಕ ಸೇವೆಯಲ್ಲಿ ತೊಡಗಿ ಜನರ ಮದ್ಯೆ ಬೆರೆತವರು, ಪನೋಲಿಬೈಲ್ ಕ್ಷೇತ್ರದ ಅಭಿವೃದ್ಧಿ ಸಮಿತಿಯಲ್ಲಿ ತೊಡಗಿಸಿದ ಇವರು ಕ್ಷೇತ್ರದ ಆಡಳಿತದ ದೋಷದ ವಿರುದ್ದ ನ್ಯಾಯಕ್ಕಾಗಿ ನ್ಯಾಯಾಲಯದಲ್ಲಿ ಹೋರಾಟದಲ್ಲಿ ಇವರ ಹೆಸರು

ಮುಂಚೂಣಿಯಲ್ಲಿದೆ.ಇವನ್ನೆಲ್ಲಾ ಗಮನಿಸಿದ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ಇವರ ಸೇವೆಯನ್ನು ನೆನಪಿಸಿ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಸಲಾಯಿತು ಎಂದು ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ದ ಹೊನ್ನಯ್ಯ ಕುಲಾಲ್ ರವರು ವಿವರಿಸಿದರು. ಈ ಕಾರ್ಯಕ್ರಮ ದ ನಿಮಿತ್ತ ಸೇವಾಶ್ರಮ ದ ಆರಾಧ್ಯ ಗುರು ರಾಯರಿಗೆ ಪೂಜೆ ಸಲ್ಲಿಸಲಾಯಿತು.. ಆಶ್ರಮವಾಸಿಗಳಿಗೆ ಹಾಗು ಬಂದಂತಹ ಸಭಿಕರಿಗೆ ಸಿಹಿಊಟ ಹಂಚಲಾಯಿತು.ಅಥಿತಿಗಳಾಗಿ ಹಿರಿಯರಾದ ನಿವೃತ್ತ ಅಂಚೆ ಸಿಬ್ಬಂದಿ ಅರಂಬೋಡಿ ಕುಂಜ್ಞಪ್ಪ ಕುಲಾಲ್, ಸಿದ್ಧಕಟ್ಟೆ ಜನೌಷದಿ ಮಾಲಕ ಮನೋಜ್ ಕುಲಾಲ್,ನಡ್ತಿಕಲ್ ಸಮಾಜಸೇವಾ ಸಂಘದ ಉಪಾಧ್ಯಕ್ಷೆ ಶ್ರೀಮತಿ ರಮ್ಯಾ ಕುಮಾರ್ ಕುಲಾಲ್, ಸಿದ್ಧಕಟ್ಟೆ ಕುಲಾಲ ಸಂಘದ ಸದಸ್ಯೆ ಶ್ರೀಮತಿ ಉಷಾ ಕೃಷ್ಣ ಕುಲಾಲ್ ಉಪಸ್ಥಿತರಿದ್ದರು.. ಹೊನ್ನಯ್ಯ ಕುಲಾಲ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು

Related posts

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya
error: Content is protected !!