23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.೨೦ರಂದು ಸಂಜೆ ನಡೆದಿದೆ.

ಹಲ್ಲೆಗೊಳಗಾದ ಮಹೇಂದ್ರ ಅವರ ತಲೆಗೆ ಗಂಭೀರ ಏಟು ತಗಲಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಹೇಂದ್ರ ಅವರು ತನ್ನ ಮೊಬೈಲ್‌ನ್ನು ಶೌಚಾಲಯದ ಒಳಗಿಟ್ಟು, ಸ್ವಚ್ಛತೆಗೊಳಿಸುತ್ತಿದ್ದ ಸಂದರ್ಭ ದೇವಸ್ಥಾನಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದವರು ಹಲ್ಲೆ ನಡೆಸಿದರೆನ್ನಲಾಗಿದೆ. ಘಟನೆಗೆ ಸ್ವಷ್ಟ ಕಾರಣ ತಿಳಿದು ಬಂದಿಲ್ಲ, ಆದರೆ ಶೌಚಾಲಯದಲ್ಲಿ ಮೊಬೈಲ್ ಇರುವುದನ್ನು ಕಂಡ ಯಾತ್ರಾರ್ಥಿಗಳು ವಿಡಿಯೋ ಮಾಡುತ್ತಿದ್ದಾನೆ ಎಂದು ಸಂಶಯಿಸಿ ಹಲ್ಲೆ ನಡೆಸಿದ್ದರೆನ್ನಲಾಗಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಲ್ಲೆ ನಡೆಸಿದವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!