July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.೨೦ರಂದು ಸಂಜೆ ನಡೆದಿದೆ.

ಹಲ್ಲೆಗೊಳಗಾದ ಮಹೇಂದ್ರ ಅವರ ತಲೆಗೆ ಗಂಭೀರ ಏಟು ತಗಲಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಹೇಂದ್ರ ಅವರು ತನ್ನ ಮೊಬೈಲ್‌ನ್ನು ಶೌಚಾಲಯದ ಒಳಗಿಟ್ಟು, ಸ್ವಚ್ಛತೆಗೊಳಿಸುತ್ತಿದ್ದ ಸಂದರ್ಭ ದೇವಸ್ಥಾನಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದವರು ಹಲ್ಲೆ ನಡೆಸಿದರೆನ್ನಲಾಗಿದೆ. ಘಟನೆಗೆ ಸ್ವಷ್ಟ ಕಾರಣ ತಿಳಿದು ಬಂದಿಲ್ಲ, ಆದರೆ ಶೌಚಾಲಯದಲ್ಲಿ ಮೊಬೈಲ್ ಇರುವುದನ್ನು ಕಂಡ ಯಾತ್ರಾರ್ಥಿಗಳು ವಿಡಿಯೋ ಮಾಡುತ್ತಿದ್ದಾನೆ ಎಂದು ಸಂಶಯಿಸಿ ಹಲ್ಲೆ ನಡೆಸಿದ್ದರೆನ್ನಲಾಗಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಲ್ಲೆ ನಡೆಸಿದವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Related posts

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!