September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ನ.20 ರಂದು ಇಂದ್ರಪ್ರಸ್ಥ ಆಡಿಟೋರಿಯಂ ನಲ್ಲಿ ನಡೆಯಿತು.

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲನೆಯನ್ನು ನೆರವೇರಿಸಿ ಮಾತನಾಡಿ, ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು ನಿಮ್ಮ ಹಿನ್ನೆಲೆಯನ್ನು ಬಿಟ್ಟು, ಏಕ ಮನಸ್ಕರಾಗಿ, ಏಕ ಸಂಸ್ಕಾರವನ್ನು ಹೊಂದಿ, ಈ ಸಂಸ್ಥೆಗೆ ಹೊಂದಿಕೊಂಡು ಹೋಗುವಂತಹ ಅನಿವಾರ್ಯತೆ ಇದೆ. ಇಂಜಿನಿಯರಿಂಗ್ ಬಹಳ ಬೆಲೆ ಬಾಳುವಂತಹ ಕೋರ್ಸ್ ಆಗಿದ್ದು, ಕಷ್ಟ ಪಟ್ಟು ಓದುವಂತಹ ಜವಾಬ್ದಾರಿ ವಿದ್ಯಾರ್ಥಿಗಳಲ್ಲಿದೆ. ಸಂಸ್ಥೆಯಲ್ಲಿರುವಂತಹ ಪ್ರಯೋಗಾಲಯ ಹಾಗೂ ಗ್ರಂಥಾಲಯವನ್ನು ಸದುಪಯೋಗ ಪಡಿಸಿಕೊಳ್ಳುವುದರ ಮೂಲಕ ಪ್ರಾಯೋಗಿಕ ಕೌಶಲ್ಯವನ್ನು ಹಾಗೂ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಿ ಎಂದು ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಡಾ. ವಿದ್ಯಾ ಕೆ. ಹಾಗೂ ನಿಶ್ಮಿತಾ ಎಂ. ನಿರೂಪಿಸಿದರು. ಗೌತಮಿ, ಕೀರ್ತನಾ ಪ್ರಾರ್ಥಿಸಿದರು. ಪ್ರಥಮ ವರ್ಷದ ಸಂಯೋಜಕ ಡಾ. ರವೀಶ್ ಪಡುಮಲೆ ವಂದಿಸಿದರು.

Related posts

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya
error: Content is protected !!