September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನ. 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐಟಿಐ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾವಳಿಯ ತ್ರೋಬಾಲ್ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಪ್ರಥಮ ಸ್ಥಾನ ಗಳಿಸಿದೆ.

ಪಂದ್ಯದಲ್ಲಿ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವಾಮಂಜೂರಿನ ಎಸ್.ಡಿ.ಎಂ. ಮಂಗಳಜ್ಯೋತಿ ಐಟಿಐ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ಪ್ರಥಮ ಸ್ಥಾನ ವಿಜೇತ ತಂಡಕ್ಕೆ ಟ್ರೋಫಿಯೊಂದಿಗೆ 3,000 ರೂ. ನಗದು ಬಹುಮಾನ ಲಭಿಸಿದ್ದು, ಲಾವಣ್ಯಾ ‘ಉತ್ತಮ ಎಸೆತಗಾರ್ತಿ’ ಹಾಗೂ ಮಂಜುಳಾ ‘ಆಲ್ ರೌಂಡರ್’ ಪ್ರಶಸ್ತಿ ಪಡೆದಿದ್ದಾರೆ.


ವಿದ್ಯಾರ್ಥಿನಿಯರನ್ನು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ವೀ. ಹೆಗ್ಗಡೆ, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.

Related posts

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya
error: Content is protected !!