37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

ಬೆಳ್ತಂಗಡಿ: ಕರ್ನಾಟಕ ರಾಜ್ಯದಲ್ಲಿ 21 ವರ್ಷಗಳ ಹಿಂದೆ ಕಾರ್ಕಳ ತಾಲೂಕಿನ ಈದುವಿನಲ್ಲಿ ನಡೆದ ಎನ್ ಕೌಂಟರ್ ಬಳಿಕ ಹತ್ತಾರು ನಕ್ಸಲ್ ಎನ್ ಕೌಂಟರ್ ನಡೆದಿದೆ. ಯಾವುದೇ ಎನ್ ಕೌಂಟರ್ ನಡೆಸುವ ಮೊದಲು ಯಾವುದೇ ಮನೆಯನ್ನು ತೆರವು ಮಾಡಿದ ಇತಿಹಾಸವಿಲ್ಲ. ಆದರೆ ವಿಕ್ರಮ್ ಗೌಡ ಎನ್ ಕೌಂಟರ್ ನಲ್ಲಿ ಮಾತ್ರ ಎನ್ ಕೌಂಟರ್ ಮೊದಲು ಸ್ಥಳೀಯ ಮನೆಯವರನ್ನು ತೆರವು ಮಾಡಿದ ಎರಡು ದಿನಗಳ ನಂತರ ಎನ್ ಕೌಂಟರ್ ನಡೆಸಿದ ಘಟನೆ ಸಂಶಯಕ್ಕೆ ಕಾರಣವಾಗಿದೆ. ಎನ್ ಕೌಂಟರ್ ನಡೆದ ಸ್ಥಳಕ್ಕೆ ಪತ್ರಿಕೆ , ಟಿವಿ ಮಾದ್ಯಮದವರನ್ನು ಪ್ರವೇಶ ನೀಡದೆ , ಶವವನ್ನು ನೋಡಲು ನಕ್ಸಲ್ ನಿಗ್ರಹ ದಳ ಬಿಡಲಿಲ್ಲ. ಮನೆಯೊಂದರಲ್ಲಿ ಎನ್ ಕೌಂಟರ್ ನಡೆದಿದೆ ಎನ್ನುವ ಪೋಲಿಸ್ ಇಲಾಖೆಯ ಹೇಳಿಕೆ ಇನ್ನೊಂದು ರೀತಿಯಲ್ಲಿ ಸಂಶಯಕ್ಕೆ ಕಾರಣವಾಗಿದೆ. ನಕ್ಸಲರು ನಡೆಸಿದ ಪ್ರತಿದಾಳಿಯಲ್ಲಿ ಪೋಲಿಸರಿಗೆ ಗಾಯವಾಗಿಲ್ಲ. ನಕ್ಸಲರ ಪ್ರತಿದಾಳಿಯ ಗುಂಡು ಯಾವುದಕ್ಕೆ ತಗುಲಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ರಾಜ್ಯದ ನಕ್ಸಲ್ ನಿಗ್ರಹ ದಳ ಇರುವಾಗ, ಎನ್ ಕೌಂಟರ್ ನಡೆಯುವ ಮೊದಲು ಕೇಂದ್ರ ಸಶಸ್ತ್ರ ಪಡೆಗಳನ್ನು ಕರೆಸಿಕೊಂಡಿದ್ದು ಏಕೆ ? ಎನ್ ಕೌಂಟರ್ ನಡೆಸಿದ್ದು ನಕ್ಸಲ್ ನಿಗ್ರಹ ದಳವೋ ಅಥವಾ ಕೇಂದ್ರ ಸಶಸ್ತ್ರ ಪಡೆಯೋ ಎಂಬ ಅನುಮಾನದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬೆಳ್ತಂಗಡಿ ಹೋರಾಟಗಾರ ಶೇಖರ್ ಲಾಯಿಲ ತಿಳಿಸಿದ್ದಾರೆ.

Related posts

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!