25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

ಬೆಳ್ತಂಗಡಿ: ಕರ್ನಾಟಕ ರಾಜ್ಯದಲ್ಲಿ 21 ವರ್ಷಗಳ ಹಿಂದೆ ಕಾರ್ಕಳ ತಾಲೂಕಿನ ಈದುವಿನಲ್ಲಿ ನಡೆದ ಎನ್ ಕೌಂಟರ್ ಬಳಿಕ ಹತ್ತಾರು ನಕ್ಸಲ್ ಎನ್ ಕೌಂಟರ್ ನಡೆದಿದೆ. ಯಾವುದೇ ಎನ್ ಕೌಂಟರ್ ನಡೆಸುವ ಮೊದಲು ಯಾವುದೇ ಮನೆಯನ್ನು ತೆರವು ಮಾಡಿದ ಇತಿಹಾಸವಿಲ್ಲ. ಆದರೆ ವಿಕ್ರಮ್ ಗೌಡ ಎನ್ ಕೌಂಟರ್ ನಲ್ಲಿ ಮಾತ್ರ ಎನ್ ಕೌಂಟರ್ ಮೊದಲು ಸ್ಥಳೀಯ ಮನೆಯವರನ್ನು ತೆರವು ಮಾಡಿದ ಎರಡು ದಿನಗಳ ನಂತರ ಎನ್ ಕೌಂಟರ್ ನಡೆಸಿದ ಘಟನೆ ಸಂಶಯಕ್ಕೆ ಕಾರಣವಾಗಿದೆ. ಎನ್ ಕೌಂಟರ್ ನಡೆದ ಸ್ಥಳಕ್ಕೆ ಪತ್ರಿಕೆ , ಟಿವಿ ಮಾದ್ಯಮದವರನ್ನು ಪ್ರವೇಶ ನೀಡದೆ , ಶವವನ್ನು ನೋಡಲು ನಕ್ಸಲ್ ನಿಗ್ರಹ ದಳ ಬಿಡಲಿಲ್ಲ. ಮನೆಯೊಂದರಲ್ಲಿ ಎನ್ ಕೌಂಟರ್ ನಡೆದಿದೆ ಎನ್ನುವ ಪೋಲಿಸ್ ಇಲಾಖೆಯ ಹೇಳಿಕೆ ಇನ್ನೊಂದು ರೀತಿಯಲ್ಲಿ ಸಂಶಯಕ್ಕೆ ಕಾರಣವಾಗಿದೆ. ನಕ್ಸಲರು ನಡೆಸಿದ ಪ್ರತಿದಾಳಿಯಲ್ಲಿ ಪೋಲಿಸರಿಗೆ ಗಾಯವಾಗಿಲ್ಲ. ನಕ್ಸಲರ ಪ್ರತಿದಾಳಿಯ ಗುಂಡು ಯಾವುದಕ್ಕೆ ತಗುಲಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ರಾಜ್ಯದ ನಕ್ಸಲ್ ನಿಗ್ರಹ ದಳ ಇರುವಾಗ, ಎನ್ ಕೌಂಟರ್ ನಡೆಯುವ ಮೊದಲು ಕೇಂದ್ರ ಸಶಸ್ತ್ರ ಪಡೆಗಳನ್ನು ಕರೆಸಿಕೊಂಡಿದ್ದು ಏಕೆ ? ಎನ್ ಕೌಂಟರ್ ನಡೆಸಿದ್ದು ನಕ್ಸಲ್ ನಿಗ್ರಹ ದಳವೋ ಅಥವಾ ಕೇಂದ್ರ ಸಶಸ್ತ್ರ ಪಡೆಯೋ ಎಂಬ ಅನುಮಾನದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬೆಳ್ತಂಗಡಿ ಹೋರಾಟಗಾರ ಶೇಖರ್ ಲಾಯಿಲ ತಿಳಿಸಿದ್ದಾರೆ.

Related posts

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya
error: Content is protected !!