July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

ಬೆಳ್ತಂಗಡಿ: ಕರ್ನಾಟಕ ರಾಜ್ಯದಲ್ಲಿ 21 ವರ್ಷಗಳ ಹಿಂದೆ ಕಾರ್ಕಳ ತಾಲೂಕಿನ ಈದುವಿನಲ್ಲಿ ನಡೆದ ಎನ್ ಕೌಂಟರ್ ಬಳಿಕ ಹತ್ತಾರು ನಕ್ಸಲ್ ಎನ್ ಕೌಂಟರ್ ನಡೆದಿದೆ. ಯಾವುದೇ ಎನ್ ಕೌಂಟರ್ ನಡೆಸುವ ಮೊದಲು ಯಾವುದೇ ಮನೆಯನ್ನು ತೆರವು ಮಾಡಿದ ಇತಿಹಾಸವಿಲ್ಲ. ಆದರೆ ವಿಕ್ರಮ್ ಗೌಡ ಎನ್ ಕೌಂಟರ್ ನಲ್ಲಿ ಮಾತ್ರ ಎನ್ ಕೌಂಟರ್ ಮೊದಲು ಸ್ಥಳೀಯ ಮನೆಯವರನ್ನು ತೆರವು ಮಾಡಿದ ಎರಡು ದಿನಗಳ ನಂತರ ಎನ್ ಕೌಂಟರ್ ನಡೆಸಿದ ಘಟನೆ ಸಂಶಯಕ್ಕೆ ಕಾರಣವಾಗಿದೆ. ಎನ್ ಕೌಂಟರ್ ನಡೆದ ಸ್ಥಳಕ್ಕೆ ಪತ್ರಿಕೆ , ಟಿವಿ ಮಾದ್ಯಮದವರನ್ನು ಪ್ರವೇಶ ನೀಡದೆ , ಶವವನ್ನು ನೋಡಲು ನಕ್ಸಲ್ ನಿಗ್ರಹ ದಳ ಬಿಡಲಿಲ್ಲ. ಮನೆಯೊಂದರಲ್ಲಿ ಎನ್ ಕೌಂಟರ್ ನಡೆದಿದೆ ಎನ್ನುವ ಪೋಲಿಸ್ ಇಲಾಖೆಯ ಹೇಳಿಕೆ ಇನ್ನೊಂದು ರೀತಿಯಲ್ಲಿ ಸಂಶಯಕ್ಕೆ ಕಾರಣವಾಗಿದೆ. ನಕ್ಸಲರು ನಡೆಸಿದ ಪ್ರತಿದಾಳಿಯಲ್ಲಿ ಪೋಲಿಸರಿಗೆ ಗಾಯವಾಗಿಲ್ಲ. ನಕ್ಸಲರ ಪ್ರತಿದಾಳಿಯ ಗುಂಡು ಯಾವುದಕ್ಕೆ ತಗುಲಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ರಾಜ್ಯದ ನಕ್ಸಲ್ ನಿಗ್ರಹ ದಳ ಇರುವಾಗ, ಎನ್ ಕೌಂಟರ್ ನಡೆಯುವ ಮೊದಲು ಕೇಂದ್ರ ಸಶಸ್ತ್ರ ಪಡೆಗಳನ್ನು ಕರೆಸಿಕೊಂಡಿದ್ದು ಏಕೆ ? ಎನ್ ಕೌಂಟರ್ ನಡೆಸಿದ್ದು ನಕ್ಸಲ್ ನಿಗ್ರಹ ದಳವೋ ಅಥವಾ ಕೇಂದ್ರ ಸಶಸ್ತ್ರ ಪಡೆಯೋ ಎಂಬ ಅನುಮಾನದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬೆಳ್ತಂಗಡಿ ಹೋರಾಟಗಾರ ಶೇಖರ್ ಲಾಯಿಲ ತಿಳಿಸಿದ್ದಾರೆ.

Related posts

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!