April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

ನ್ಯಾಯತರ್ಪು : ಇಲ್ಲಿನ ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕ ನಗರ ಭಜನೆ ಕಾರ್ಯಕ್ರಮಕ್ಕೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಭಂದಕ ಗಿರೀಶ್ ಶೆಟ್ಟಿ ಗೇರುಕಟ್ಟೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಹಿಂದೂ ಸನಾತನ ಧರ್ಮದ ಮೂಲ ಭಜನೆ. ಕಳೆದ 25 ವರ್ಷಗಳಿಂದ ಪ್ರತಿ ವರ್ಷವೂ ಭಜನ ಮಂಡಳಿ ಆಸುಪಾಸಿನಲ್ಲಿ 1 ವಾರಗಳ ಕಾಲ ಸಂಜೆ ಸಮಯದಲ್ಲಿ ಪ್ರತಿ ಮನೆ, ಮನೆಗೆ ಭೇಟಿ ನೀಡುವ ಮೂಲಕ ಧರ್ಮ ಮತ್ತು ದೇವರ ಸಂಕಿರ್ತನೆಯನ್ನು ಹಾಡುವ ಜೊತೆಗೆ ಭಕ್ತಿ, ಧಾರ್ಮಿಕ ಚಿಂತನೆಯಲ್ಲಿ ಯುವಕರನ್ನು ಹಾಗೂ ಮಕ್ಕಳನ್ನು ತೊಡಗಿಸಿಕೊಂಡಾಗ ಮುಂದಿನ ಪೀಳಿಗೆಗೆ ಧರ್ಮ ಜಾಗೃತಿಯಾಗಲು ಮಾದರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಭಜನಾ ಮಂಡಳಿಯ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು. ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸಿಬ್ಬಂದಿ ಜಯರಾಮ ಭಟ್, ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ. ಕಾರ್ಯದರ್ಶಿ ಯೋಗೀಶ್ ಎಮ್., ಭಜನಾ ಮಂಡಳಿ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಉಮೇಶ್ ಕೇಲ್ದಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
error: Content is protected !!