July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

ನ್ಯಾಯತರ್ಪು : ಇಲ್ಲಿನ ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ 25ನೇ ವರ್ಷದ ವಾರ್ಷಿಕ ನಗರ ಭಜನೆ ಕಾರ್ಯಕ್ರಮಕ್ಕೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಭಂದಕ ಗಿರೀಶ್ ಶೆಟ್ಟಿ ಗೇರುಕಟ್ಟೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಹಿಂದೂ ಸನಾತನ ಧರ್ಮದ ಮೂಲ ಭಜನೆ. ಕಳೆದ 25 ವರ್ಷಗಳಿಂದ ಪ್ರತಿ ವರ್ಷವೂ ಭಜನ ಮಂಡಳಿ ಆಸುಪಾಸಿನಲ್ಲಿ 1 ವಾರಗಳ ಕಾಲ ಸಂಜೆ ಸಮಯದಲ್ಲಿ ಪ್ರತಿ ಮನೆ, ಮನೆಗೆ ಭೇಟಿ ನೀಡುವ ಮೂಲಕ ಧರ್ಮ ಮತ್ತು ದೇವರ ಸಂಕಿರ್ತನೆಯನ್ನು ಹಾಡುವ ಜೊತೆಗೆ ಭಕ್ತಿ, ಧಾರ್ಮಿಕ ಚಿಂತನೆಯಲ್ಲಿ ಯುವಕರನ್ನು ಹಾಗೂ ಮಕ್ಕಳನ್ನು ತೊಡಗಿಸಿಕೊಂಡಾಗ ಮುಂದಿನ ಪೀಳಿಗೆಗೆ ಧರ್ಮ ಜಾಗೃತಿಯಾಗಲು ಮಾದರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಭಜನಾ ಮಂಡಳಿಯ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಲಾಯಿತು. ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸಿಬ್ಬಂದಿ ಜಯರಾಮ ಭಟ್, ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ. ಕಾರ್ಯದರ್ಶಿ ಯೋಗೀಶ್ ಎಮ್., ಭಜನಾ ಮಂಡಳಿ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಉಮೇಶ್ ಕೇಲ್ದಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!