23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

ಬೆಳ್ತಂಗಡಿ: ನ .14 ರಂದು ಬೆಳ್ತಂಗಡಿ ಗುಂಡೂರಿ ಗ್ರಾಮ.ಶ್ರೀಗುರುಚೈತನ್ಯಸೇವಾಶ್ರಮ ಗುಂಡೂರಿ ಬೆಳ್ತಂಗಡಿ ತಾಲೂಕು ಇಲ್ಲಿ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ನಿವೃತ್ತ ಸರಕಾರಿ ಉದ್ಯೋಗಿ ದಿವಂಗತ ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕ್ಕೂಳ್ಳಲಾಯಿತು.
ಮೃತರು ತನ್ನ 19 ನೇ ವಯಸ್ಸಿನಲ್ಲಿ ಸರಕಾರಿ ಶ್ಯಾನುಭೋಗರಾಗಿ ದುಡಿದು ನಂತರ ಗ್ರಾಮಲೆಕ್ಕಿಗರಾಗಿ ಸರಕಾರಿ ಸೇವೆ ಸಲ್ಲಿಸಿದ್ದಾರೆ.ಈ ಸಂಧರ್ಭದಲ್ಲಿ ಅದೆಷ್ಟೋ ಬಡಕುಟುಂಬಗಳಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಸಿಗುವಂತೆ ಪ್ರಾಮಾಣಿಕ ಪ್ರಯತ್ನಪಟ್ಟವರು.ನಿವೃತ್ತಿ ಜೀವನದಲ್ಲಿ ಧಾರ್ಮಿಕ,ಸಮಾಜಿಕ ಸೇವೆಯಲ್ಲಿ ತೊಡಗಿ ಜನರ ಮದ್ಯೆ ಬೆರೆತವರು, ಪನೋಲಿಬೈಲ್ ಕ್ಷೇತ್ರದ ಅಭಿವೃದ್ಧಿ ಸಮಿತಿಯಲ್ಲಿ ತೊಡಗಿಸಿದ ಇವರು ಕ್ಷೇತ್ರದ ಆಡಳಿತದ ದೋಷದ ವಿರುದ್ದ ನ್ಯಾಯಕ್ಕಾಗಿ ನ್ಯಾಯಾಲಯದಲ್ಲಿ ಹೋರಾಟದಲ್ಲಿ ಇವರ ಹೆಸರು

ಮುಂಚೂಣಿಯಲ್ಲಿದೆ.ಇವನ್ನೆಲ್ಲಾ ಗಮನಿಸಿದ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ಇವರ ಸೇವೆಯನ್ನು ನೆನಪಿಸಿ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಸಲಾಯಿತು ಎಂದು ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ದ ಹೊನ್ನಯ್ಯ ಕುಲಾಲ್ ರವರು ವಿವರಿಸಿದರು. ಈ ಕಾರ್ಯಕ್ರಮ ದ ನಿಮಿತ್ತ ಸೇವಾಶ್ರಮ ದ ಆರಾಧ್ಯ ಗುರು ರಾಯರಿಗೆ ಪೂಜೆ ಸಲ್ಲಿಸಲಾಯಿತು.. ಆಶ್ರಮವಾಸಿಗಳಿಗೆ ಹಾಗು ಬಂದಂತಹ ಸಭಿಕರಿಗೆ ಸಿಹಿಊಟ ಹಂಚಲಾಯಿತು.ಅಥಿತಿಗಳಾಗಿ ಹಿರಿಯರಾದ ನಿವೃತ್ತ ಅಂಚೆ ಸಿಬ್ಬಂದಿ ಅರಂಬೋಡಿ ಕುಂಜ್ಞಪ್ಪ ಕುಲಾಲ್, ಸಿದ್ಧಕಟ್ಟೆ ಜನೌಷದಿ ಮಾಲಕ ಮನೋಜ್ ಕುಲಾಲ್,ನಡ್ತಿಕಲ್ ಸಮಾಜಸೇವಾ ಸಂಘದ ಉಪಾಧ್ಯಕ್ಷೆ ಶ್ರೀಮತಿ ರಮ್ಯಾ ಕುಮಾರ್ ಕುಲಾಲ್, ಸಿದ್ಧಕಟ್ಟೆ ಕುಲಾಲ ಸಂಘದ ಸದಸ್ಯೆ ಶ್ರೀಮತಿ ಉಷಾ ಕೃಷ್ಣ ಕುಲಾಲ್ ಉಪಸ್ಥಿತರಿದ್ದರು.. ಹೊನ್ನಯ್ಯ ಕುಲಾಲ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು

Related posts

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!