ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.೨೦ರಂದು ಸಂಜೆ ನಡೆದಿದೆ.

ಹಲ್ಲೆಗೊಳಗಾದ ಮಹೇಂದ್ರ ಅವರ ತಲೆಗೆ ಗಂಭೀರ ಏಟು ತಗಲಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಹೇಂದ್ರ ಅವರು ತನ್ನ ಮೊಬೈಲ್‌ನ್ನು ಶೌಚಾಲಯದ ಒಳಗಿಟ್ಟು, ಸ್ವಚ್ಛತೆಗೊಳಿಸುತ್ತಿದ್ದ ಸಂದರ್ಭ ದೇವಸ್ಥಾನಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದವರು ಹಲ್ಲೆ ನಡೆಸಿದರೆನ್ನಲಾಗಿದೆ. ಘಟನೆಗೆ ಸ್ವಷ್ಟ ಕಾರಣ ತಿಳಿದು ಬಂದಿಲ್ಲ, ಆದರೆ ಶೌಚಾಲಯದಲ್ಲಿ ಮೊಬೈಲ್ ಇರುವುದನ್ನು ಕಂಡ ಯಾತ್ರಾರ್ಥಿಗಳು ವಿಡಿಯೋ ಮಾಡುತ್ತಿದ್ದಾನೆ ಎಂದು ಸಂಶಯಿಸಿ ಹಲ್ಲೆ ನಡೆಸಿದ್ದರೆನ್ನಲಾಗಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಲ್ಲೆ ನಡೆಸಿದವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Related posts

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!